Latest News

Happenings & Events

ಶ್ರೀ ಯೊಗೇಶ ಹಿರೇಮಠ ಇವರ ಆಕಸ್ಮಿಕವಾಗಿ ನಿಧನರಾದ ಬಗ್ಗೆ ಸನ್ಮಾನ್ಯ ಸಂಸದರಾದ ಶ್ರೀ ಅನಂತಕುಮಾರ ಹೆಗಡೆಯವರು ತೀವೃ ಸಂತಾಪ

ಯಲ್ಲಾಪುರ ಪಟ್ಟಣ ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ಯೊಗೇಶ ಹಿರೇಮಠ ಇವರ ಆಕಸ್ಮಿಕವಾಗಿ ನಿಧನರಾದ ಬಗ್ಗೆ ಸನ್ಮಾನ್ಯ ಸಂಸದರಾದ ಶ್ರೀ  ಅನಂತಕುಮಾರ ಹೆಗಡೆಯವರು ತೀವೃ ಸಂತಾಪ ವ್ಯಕ್ತಪಡಿಸಿರುತ್ತಾರೆ.

ಶ್ರೀ  ಯೊಗೇಶ ಹಿರೇಮಠ ಇವರು ಬಾಲ್ಯದಿಂದಲೂ ರಾಷ್ಟ್ರೀಯ  ಸ್ವಯಂಸೇವಕ ಸಂಘದ ಕಾರ್ಯಕರ್ತರಾಗಿದ್ದು, ನಂತರದ ದಿನಗಳಲ್ಲಿ ಭಾರತೀಯ ಜನತಾ ಪಕ್ಷದ  ಸಕ್ರಿಯ ಕಾರ್ಯಕರ್ತರಾಗಿದ್ದು, ಯಲ್ಲಾಪುರ ಪಟ್ಟಣ ಪಂಚಾಯತ್ ಸದಸ್ಯರಾಗಿ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಯಲ್ಲಾಪುರ ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷ  ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಬೆಳೆಯಲು ಹಗಲಿರುಳು ಶ್ರಮಿಸಿದ ಕೆಲವೇ ಕೆಲವು ಕಾರ್ಯಕರ್ತರಲ್ಲಿ ಇವರೂ ಒಬ್ಬರು.

ಇವರ ಅಗಲಿಕೆಯಿಂದ ಭಾರತೀಯ ಜನತಾ ಪಕ್ಷ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ನೇರ ನುಡಿಯಿಂದ ಎಲ್ಲರ ಗಮನ ಸೆಳೆಯುವ ವ್ಯಕ್ತಿತ್ವ ಅವರದ್ದಾಗಿತ್ತು.

ಓಂ ಶಾಂತಿ!!

#ಅನಂತಕುಮಾರಹೆಗಡೆ_ಕಾರ್ಯಾಲಯ

Related posts