Latest News

Happenings & Events

ಚಂದ್ರ ಮಠ ಹಾಗು ಹಿಚ್ಕಡ ಗ್ರಾಮದಲ್ಲಿ ತೆರೆಯಲಾಗಿದ್ದ ಆಶ್ರಯ ಕೇಂದ್ರಗಳಿಗೆ ಶ್ರೀ ಅನಂತಕುಮಾರ ಹೆಗಡೆಯವರು ಭೇಟಿ ನೀಡಿದರು

ಇಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಚಂದ್ರ ಮಠ ಹಾಗು ಹಿಚ್ಕಡ ಗ್ರಾಮದಲ್ಲಿ ಗಂಗಾವಳಿ ನದಿ ನೆರೆ ಹಾವಳಿಗೆ ತುತ್ತಾದ ಸಂತ್ರಸ್ತರನ್ನು ಮಾನ್ಯ ಸಂಸದರಾದ ಶ್ರೀ ಅನಂತಕುಮಾರ ಹೆಗಡೆಯವರು ಆಶ್ರಯ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯ ಬಗ್ಗೆ ಅವಲೋಕನೆ ನಡೆಸಿದರು. 

ಅಂಕೋಲಾ ತಾಲೂಕಿನಲ್ಲಿ ಒಟ್ಟೂ ೨೩ ಆಶ್ರಯ ಕೇಂದ್ರಗಳನ್ನು ತೆರೆಯಲಾಗಿದ್ದು, ಮಾನ್ಯ ಸಂಸದರು ಅಲ್ಲಿಯ ವೈದ್ಯಾಧಿಕಾರಿಗಳನ್ನು ಉದ್ದೇಶಿಸಿ ಜನರಿಗೆ ಸೂಕ್ತ ಚಿಕಿತ್ಸೆ ಹಾಗೂ ಔಷದಿ ಒದಗಿಸುವಂತೆ ನಿರ್ದೇಶಿಸಿದರು.  ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿ ಹಾಗು ಸಂತ್ರಸ್ತರ ಆರೋಗ್ಯದ ಬಗ್ಗೆ ಸಹ ಮಾಹಿತಿ ಪಡೆದರು.  ಮಾನ್ಯ ಸಂಸದರು, ಅಲ್ಲಿನ ಜನರಿಗೆ ಸಕಲ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿ, ಜನರು ಧೃತಿಗೆಡಬಾರದೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ  ಶ್ರೀಮತಿ ರೂಪಾಲಿ ನಾಯ್ಕ್ , ಮಾನ್ಯ ಶಾಸಕಿ, ಕಾರವಾರ-ಅಂಕೋಲಾ ಹಾಗು ಇತರ ಸಂಭಂದಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

#ಅನಂತಕುಮಾರಹೆಗಡೆ_ಕಾರ್ಯಾಲಯ

Related posts